ವಿದ್ಯಾರ್ಥಿಗಳಲ್ಲಿ ಹಿಂಜರಿಕೆ ಬೇಡ: ನಾನಾಗೌಡ ಪಾಟೀಲ

Oct 4, 2024 - 11:46
 0
ವಿದ್ಯಾರ್ಥಿಗಳಲ್ಲಿ ಹಿಂಜರಿಕೆ ಬೇಡ: ನಾನಾಗೌಡ ಪಾಟೀಲ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ 

ದೇವರಹಿಪ್ಪರಗಿ: ಕ್ರೀಡೆ ಹಾಗೂ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲು ವಿದ್ಯಾರ್ಥಿಗಳು ಹಿಂಜರಿಯಬಾರದು ಎಂದು ಪಟ್ಟಣದ ಜ್ಞಾನಜ್ಯೋತಿ ಹಾಗೂ ಪ್ರಿನ್ಸ್ ಪಬ್ಲಿಕ್ ಶಾಲೆಯಗಳ ಸಂಸ್ಥೆಯ ಅಧ್ಯಕ್ಷರಾದ ನಾನಾಗೌಡ ಪಾಟೀಲ ಹೇಳಿದರು.

ಪಟ್ಟಣದ ತಾಳಿಕೋಟಿ ರಸ್ತೆಯಲ್ಲಿರುವ ಜ್ಞಾನ ಜ್ಯೋತಿ ಶಾಲಾ ಆವರಣದಲ್ಲಿ ಗಾಂಧಿ ಹಾಗೂ ಶಾಸ್ತ್ರೀಯ ಅವರ ಜಯಂತಿ ಪ್ರಯುಕ್ತ ಏರ್ಪಡಿಸಿದ್ದ ವಿಜ್ಞಾನ ಹಾಗೂ ರಂಗೋಲಿ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಸೋಲು-ಗೆಲುವು ಸಾಮಾನ್ಯ. ಹೀಗಾಗಿ ಯಾವುದೇ ಭಯ ಇಲ್ಲದೆ ಪ್ರತಿಭೆಯನ್ನು ಅಭಿವ್ಯಕ್ತಪಡಿಸಬೇಕು. ಸ್ಪರ್ಧೆಗಳು ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಒದಗಿಸಲಿದೆ. ಮಕ್ಕಳ ಜ್ಞಾನ ವೃದ್ಧಿಗೂ ಸಹಕಾರಿ ಆಗಲಿವೆ ಎಂದರು.

ನಂತರ ವಿಜ್ಞಾನ ಚಿತ್ರ ಹಾಗೂ ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿ ಗೆದ್ದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಕೊಟ್ಟು ಅಭಿನಂದಿಸಿದರು.

ಪ್ರಾಸ್ತಾವಿಕವಾಗಿ ಶಾಲೆಯ ಮುಖ್ಯ ಶಿಕ್ಷಕಿ ಜ್ಯೋತಿ ಬಾಗೇವಾಡಿ ಮಾತನಾಡಿದರು.

ಮಹಾಲಕ್ಷ್ಮಿ ಗೊಡ್ಯಾಳ ಕಾರ್ಯಕ್ರಮ ನಡೆಸಿಕೊಟ್ಟರು. 

ಇದೇ ಸಂದರ್ಭದಲ್ಲಿ ಶಿಕ್ಷಕರಾದ ಸಂಜಯ ಜಾಧವ,ಕೆ.ಬಿ.ಪಾಟೀಲ, ರೇಣುಕಾ ಬಗಲಿ, ಶಬಾನಾ ನದಾಫ್,ನಿಲುಪರ ಪಾನಪರೋಷ, ಭುವನೇಶ್ವರಿ ಒಂಟೇತಿನ, ಕಲಾವತಿ, ರಶ್ಮಿ ಹೊನ್ನುಟಗಿ, ಮಾದೇವಿ ರಾಠೋಡ ಸೇರಿದಂತೆ ಶಾಲೆಯ ಬೋಧಕ ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.