ಸಂತೋಷ ಬಂಡೆಗೆ ರಾಜ್ಯ ಪ್ರಶಸ್ತಿ ಪ್ರದಾನ

Feb 2, 2025 - 19:55
 0
ಸಂತೋಷ ಬಂಡೆಗೆ ರಾಜ್ಯ ಪ್ರಶಸ್ತಿ ಪ್ರದಾನ
ಇಂಡಿ: ರವಿವಾರದಂದು ವಿಜಯಪುರ ನಗರದ ಚೇತನಾ ಕಾಲೇಜಿನಲ್ಲಿ ಕಪ್ಪತಗಿರಿ ಫೌಂಡೇಶನ್ ರಾಜ್ಯ ಘಟಕ ಗದಗ, ಕಪ್ಪತಗಿರಿ ಸಾಹಿತ್ಯ ಸಾಂಸ್ಕೃತಿಕ ಕಲಾ ವೇದಿಕೆಯ ದ್ವಿತೀಯ ವಾರ್ಷಿಕೋತ್ಸವ ಸಮಾರಂಭದಲ್ಲಿ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯ ಇಂಗ್ಲೀಷ್ ಶಿಕ್ಷಕ ಸಂತೋಷ ಬಂಡೆ ಅವರ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ ಸೇವೆಯನ್ನು ಪರಿಗಣಿಸಿ 'ರಾಜ್ಯ ಮಟ್ಟದ ಕರುನಾಡ ಕಿರೀಟ'
ಪ್ರಶಸ್ತಿಯನ್ನು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಪ್ರದಾನ ಮಾಡಿದರು.
       ಈ ಸಂದರ್ಭದಲ್ಲಿ ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಡಾ ಕುಶಾಲ ಬರಗೂರ, ಚೇತನಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ರಾಜಶ್ರೀ ಜುಗತಿ, ಚಂದ್ರಕಲಾ ಇಟಗಿಮಠ, ನ್ಯಾಯವಾದಿ ಮಲ್ಲಿಕಾರ್ಜುನ ಬೃಂಗಿಮಠ, ಧಾರವಾಡದ ಹಿರಿಯ ಸಾಹಿತಿ ಡಾ ವೈ ಎಂ ಭಜಂತ್ರಿ, ವೇದಿಕೆಯ ಜಿಲ್ಲಾಧ್ಯಕ್ಷೆ ಸುಜ್ಞಾನಿ ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.