ಇಂಡಿ: ರವಿವಾರದಂದು ವಿಜಯಪುರ ನಗರದ ಚೇತನಾ ಕಾಲೇಜಿನಲ್ಲಿ ಕಪ್ಪತಗಿರಿ ಫೌಂಡೇಶನ್ ರಾಜ್ಯ ಘಟಕ ಗದಗ, ಕಪ್ಪತಗಿರಿ ಸಾಹಿತ್ಯ ಸಾಂಸ್ಕೃತಿಕ ಕಲಾ ವೇದಿಕೆಯ ದ್ವಿತೀಯ ವಾರ್ಷಿಕೋತ್ಸವ ಸಮಾರಂಭದಲ್ಲಿ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯ ಇಂಗ್ಲೀಷ್ ಶಿಕ್ಷಕ ಸಂತೋಷ ಬಂಡೆ ಅವರ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ ಸೇವೆಯನ್ನು ಪರಿಗಣಿಸಿ 'ರಾಜ್ಯ ಮಟ್ಟದ ಕರುನಾಡ ಕಿರೀಟ'
ಪ್ರಶಸ್ತಿಯನ್ನು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಬೆಂಗಳೂರಿನ ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಡಾ ಕುಶಾಲ ಬರಗೂರ, ಚೇತನಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ರಾಜಶ್ರೀ ಜುಗತಿ, ಚಂದ್ರಕಲಾ ಇಟಗಿಮಠ, ನ್ಯಾಯವಾದಿ ಮಲ್ಲಿಕಾರ್ಜುನ ಬೃಂಗಿಮಠ, ಧಾರವಾಡದ ಹಿರಿಯ ಸಾಹಿತಿ ಡಾ ವೈ ಎಂ ಭಜಂತ್ರಿ, ವೇದಿಕೆಯ ಜಿಲ್ಲಾಧ್ಯಕ್ಷೆ ಸುಜ್ಞಾನಿ ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.