ಕಾರ್ಮಿಕರ ಮೇಲಿನ ಹಲ್ಯೆ ಇಡೀ ಜಿಲ್ಲೆ ತಲೆ ತಗ್ಗಿಸುವ ಸಂಗತಿ: ಕದ್ದರಕಿ

ಸಿಂದಗಿ: ವಿಜಯಪುರ ಜಿಲ್ಲೆಯಲ್ಲಿ ಕಾರ್ಮಿಕರ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದವರಿಗೆ ಕಠಿಣ ಶಿಕ್ಷೆ ಜೊತೆಗೆ ಕಾರ್ಮಿಕರಿಗೆ ಸೂಕ್ತ ಭದ್ರತೆ ಹಾಗೂ ಪರಿಹಾರ ನೀಡಬೇಕು ಎಂದು ಬಿಜೆಪಿ ಎಸ್.ಟಿ.ಮೋರ್ಚಾ ತಾಲೂಕಾಧ್ಯಕ್ಷ ಪ್ರಶಾಂತ ಕದ್ದರಕಿ ಆಗ್ರಹಿಸಿದರು.
ಪ್ರಕರಣದ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ವಿಜಯಪುರ ನಗರದ ಹೊರ ವಲಯದಲ್ಲಿ ನಡೆದ ಇಟ್ಟಂಗಿ ಬಟ್ಟಿ ಕಾರ್ಮಿಕರ ಮೇಲಿನ ಹಲ್ಲೆ ಇಡೀ ಜಿಲ್ಲೆಯೇ ತಲೆ ತಗ್ಗಿಸುವ ಸಂಗತಿಯಾಗಿದೆ. ವಿಡಿಯೋ ಮಾಡಿರುವ ಹಿನ್ನಲೆ ಪ್ರಕರಣ ಬೆಳಕಿಗೆ ಬಂದಿದೆ. ಇದರಂತೆ ಇನ್ನೂ ಹಲವಾರು ಕಡೆ ತೆರೆಯ ಮರೆಯಲ್ಲಿ ನಿತ್ಯ ದೌರ್ಜನ್ಯ, ದಬ್ಬಾಳಿಕೆ ನಡೆಯುತ್ತಲೇ ಇದೆ. ಈ ಕುರಿತು ರಾಜ್ಯ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆ ಸಚಿವರು ವಿಶೇಷ ತನಿಖಾ ತಂಡ ರಚಿಸಿ ರಾಜ್ಯದಲ್ಲಿರುವ ಕಾರ್ಮಿಕರ ರಕ್ಷಣೆಗೆ ನಿಲ್ಲಬೇಕಿದೆ.
ಕಾರ್ಮಿಕ ಎಂದರೇ ಕಾಯಕಯೋಗಿ ಅವರಿಗೆ ಸೂಕ್ತ ಭದ್ರತೆ ರಕ್ಷಣೆ ಕೊಡುವುದು ಸರ್ಕಾರದ ಕರ್ತವ್ಯ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಗೂಂಡಾಗಿರಿ, ದೌರ್ಜನ್ಯ, ಕಳ್ಳತನ, ರಾಬರಿ, ಪೈರಿಂಗ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇವೆ ಸಾರ್ವಜನಿಕರು ಹಾಗೂ ಜಿಲ್ಲೆಯ ನಿವಾಸಿಗಳು ದರೋಡೆಕೋರರ ದಾಳಿಗೆ ಬೆಚ್ಚಿ ಬಿದ್ದಿದ್ದಾರೆ. ಗೃಹ ಇಲಾಖೆಯ ಕಾರ್ಯ ವೈಖರಿ ಸಂಪೂರ್ಣ ವಿಫಲವಾಗಿದೆ. ಜನ ಆತಂಕದಲ್ಲಿ ಜೀವನ ನಡೆಸುವ ಪರಸ್ಥಿತಿ ಎದುರಾಗಿದೆ. ಇಷ್ಟೆಲ್ಲಾ ನಡೆದರೂ ಸರ್ಕಾರ ಕುರುಡು ಜಾಣತನ ಪ್ರದರ್ಶಿಸುತ್ತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾದಂತೆ ರಾಜ್ಯದಲ್ಲಿ ಸಾರ್ವಜನಿಕ ಸ್ನೇಹಿ ಸರ್ಕಾರ ಇಲ್ಲದಿರುವುದು ಖೇದಕರ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.