ಯರಗಲ್ ಬಿಕೆ ಗ್ರಾಮದ ನಾರಾಯಣಪುರ ಎಡದಂಡೆ ಕಾಲುವೆಯಲ್ಲಿ ಅನಾಮದೇಯ ವ್ಯಕ್ತಿ ಶವ ಪತ್ತೆ

Jan 23, 2025 - 10:44
 0
ಯರಗಲ್ ಬಿಕೆ ಗ್ರಾಮದ ನಾರಾಯಣಪುರ ಎಡದಂಡೆ ಕಾಲುವೆಯಲ್ಲಿ ಅನಾಮದೇಯ ವ್ಯಕ್ತಿ ಶವ ಪತ್ತೆ

ಸಿಂದಗಿ: ತಾಲೂಕಿನ ಯರಗಲ್ ಬಿ.ಕೆ ಗ್ರಾಮದಲ್ಲಿ ಹಾಯ್ದು ಹೋಗಿರುವ ನಾರಾಯಣಪುರ ಎಡದಂಡೆ ಕಾಲುವೆಯಲ್ಲಿ ಅನಾಮದೇಯ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ. ಅಂದಾಜು 35-45ರ ವಯೋಮಿತಿಯ ಮೃತದೇಹವಾಗಿದೆ. ಗುರುತು ಪತ್ತೆಯಾಗದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಗ್ರಾಮದ ವ್ಯಕ್ತಿಯೊಬ್ಬರು ಇದನ್ನು ನೋಡಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹದ ಮೇಲೆ ನೀಲಿ ಗೆರೆಗಳಿರುವ ಉದ್ದ ತೋಳಿನ ಅಂಗಿ, ಚಾಕ್ಲೇಟ್ ಬಣ್ಣದ ಹಾಫ್ ಬನಿಯನ್, ಕಡು ನೀಲಿ ಬಣ್ಣದ ಪ್ಯಾಂಟ್ ಇದೆ. ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವುದರಿಂದ ಗುರುತು, ವಿಳಾಸ ತಿಳಿದು ಬಂದಿಲ್ಲ ಎಂದು ಹೇಳಲಾಗಿದೆ. ಜನವರಿ 16, 2025ರಿಂದ ಜನವರಿ 22, 2025ರ ನಡುವೆ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.