ಹಲ್ಲೆಗೋಳಗಾದ ಕೂಲಿ ಕಾರ್ಮಿಕರಿಗೆ ಸರ್ಕಾರ 10ಲಕ್ಷ ರೂ. ಪರಿಹಾರ ಘೋಷಣೆ ಮಾಡಲಿ: ಮಯೂರ

ಸಿಂದಗಿ: ಕೆಲವು ದಿನಗಳ ಹಿಂದೆ ವಿಜಯಪುರ ನಗರದ ಹೊರವಲಯದಲ್ಲಿ ಇಟ್ಟಂಗಿ ಬಟ್ಟಿಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರನ್ನು ಕೆಲಸಕ್ಕೆ ಕರೆದೊಯ್ದು. ಮಾಲಿಕ ಹಾಗೂ ಅವರ ಗ್ಯಾಂಗ್ ಕಾರ್ಮಿಕರನ್ನು ಮನಬಂದಂತೆ ಥಳಿಸಿ ಮೃಗಿಯ ವರ್ತನೆ ಮೆರೆದಿರುವ ಘಟನೆ ಇಡೀ ಮಾನವ ಕುಲ ತಲೆತಗ್ಗಿಸುವ ವಿಷಯ ಎಂದು ದಸಂಸ ಜಿಲ್ಲಾ ಸಂಚಾಲಕ ವೈ.ಸಿ.ಮಯೂರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಸಂವಿಧಾನ ಜಾರಿಯಾಗಿ 75ರ ಸುವರ್ಣ ಮಹೋತ್ಸವ ಆಚರಿಸುವ ಸಂದರ್ಭದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿರುವುದು ಅತ್ಯಂತ ಖೇದಕರ ಸಂಗತಿ. ದೌರ್ಜನ್ಯಕೋರರೆಲ್ಲರನ್ನೂ ಪೊಲೀಸ್ ಇಲಾಖೆ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ನೊಂದ ಕುಟುಂಬಗಳಿಗೆ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕು. ಅಲ್ಲದೇ ದೌರ್ಜನ್ಯದಲ್ಲಿ ನೊಂದವರಿಗೆ ತಲಾ 10ಲಕ್ಷ ರೂ. ಪರಿಹಾರ ಘೋಷಿಸಬೇಕು. ಮತ್ತು ಇಟ್ಟಂಗಿ ಬಟ್ಟಿಯ ಪರವಾನಿಗೆ ರದ್ದು ಮಾಡಬೇಕು. ಹಾಗೂ ಜಿಲ್ಲೆಯ ಎಲ್ಲ ಇಟ್ಟಂಗಿ ಬಟ್ಟಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ವೈ.ಸಿ.ಮಯೂರ ಹಾಗೂ ಸಿಂದಗಿ ತಾಲೂಕ ಸಂಚಾಲಕ ಶರಣು ಚಲುವಾದಿ ಜಂಟಿಯಾಗಿ ಹೇಳಿಕೆ ನೀಡಿದ್ದಾರೆ..