ಮಾನವ ಹಕ್ಕುಗಳ ಬಗ್ಗೆ ಜಾಗೃತಿ ಅವಶ್ಯ : ಅಂಗಡಿ

ಜಗತ್ತಿನ ಎಲ್ಲ ಮಾನವರು ಪಡೆದ ಮೂಲ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳನ್ನು ಮಾನವ ಹಕ್ಕುಗಳು ಎನ್ನುವರು. ಅವುಗಳ ಬಗ್ಗೆ ಜಾಗೃತಿ ಮೂಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಸಗನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಹೇಳಿದರು.
ರಂಗAಪೇಟೆಯ ಬಸವಪ್ರಭು ತರಬೇತಿ ಕೇಂದ್ರದಲ್ಲಿ ನೆಹರು ಯುವಕೇಂದ್ರ ಹಾಗೂ ಸಗರನಾಡು ಯುವಕ ಸಂಘ ಕನ್ನೆಳ್ಳಿ ಸಹಯೋಗದಲ್ಲಿ ಆಯೋಜಿಸಿದ್ದ ಮಾನವ ಹಕ್ಕುಗಳ ದಿನ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಸಾಮಾನ್ಯವಾಗಿ ಮಾನವ ಹಕ್ಕುಗಳು ಎಂದು ಕರೆಯಲಾಗುವ ಹಕ್ಕುಗಳಲ್ಲಿ ನಾಗರಿಕ ಮತ್ತು ರಾಜಕೀಯ ಹಕ್ಕುಗಳು ಹಾಗೂ ಸಾಮಾಜಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಹಕ್ಕುಗಳು ಮುಖ್ಯವಾಗಿವೆ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ಸಾಹಿತಿ ಶರಣಗೌಡ ಪಾಟಿಲ ಜೈನಾಪೂರ ಮಾತನಾಡಿ ನಾಗರಿಕ ಮತ್ತು ರಾಜಕೀಯ ಹಕ್ಕುಗಳಲ್ಲಿ ಜೀವನದ ಹಕ್ಕು, ಸ್ವಾತಂತ್ರ್ಯ, ಆಸ್ತಿ, ಅಭಿವ್ಯಕ್ತಿ ಸ್ವಾತಂತ್ರ್ಯ ಸಂತೋಷದ ಅನ್ವೇಷಣೆ ಕಾನೂನು ಸಮಾನತೆಯ ಹಕ್ಕುಗಳು ಒಳಗೊಂಡಿವೆ. ಸಾಮಾಜಿಕ ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಹಕ್ಕುಗಳಲ್ಲಿ ವಿಜ್ಞಾನ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಭಾಗವಹಿಸುವ ಹಕ್ಕು ಕೆಲಸ ಮಾಡುವ ಹಕ್ಕು ಮತ್ತು ಶಿಕ್ಷಣದ ಹಕ್ಕುಗಳನ್ನು ಒಳಗೊಂಡಿವೆ ಎಂದರು. ಹಿರಿಯ ಮುಖಂಡ ಶಿವಶರಣಪ್ಪ ಹೆಡಿಗಿನಾಳ ಕಾರ್ಯಕ್ರಮವನ್ನು ಉದ್ಘಾಟಿಸಿದರು, ನಫಿನಾ ಬೇಗಂ, ರೇಷ್ಮಾ ಬೇಗಂ ಅತಿಥಿಗಳಾಗಿ ಪಾಲ್ಗೊಂಡಿದ್ದರು, ಕಾರ್ಯಕ್ರಮವನ್ನು ಬಸಣ್ಣಗೌಡ ಸೂಗುರು ನಿರುಪಿಸಿ ವಂದಿಸಿದರು.