ಸಿಎಂ ಸಿದ್ದರಾಮಯ್ಯಗೆ ಸ್ನೇಹಲತಾ ಶೆಟ್ಟಿ ಭೇಟಿ

ವಿಜಯಪುರ : ಕೆಪಿಸಿಸಿ ಮಹಿಳಾ ಕಾರ್ಯದರ್ಶಿ ಶ್ರೀಮತಿ ಸ್ನೇಹಲತಾ ಪಿ ಶೆಟ್ಟಿ ಜ.30 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.
ಈ ವೇಳೆ ರಾಜ್ಯದಲ್ಲಿ ಮಹಿಳೆಯರ ಸಮಸ್ಯೆಗಳನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದು ಅವುಗಳ ಪರಿಹರಿಸುವ ಬಗ್ಗೆ ಚರ್ಚೆ ಮಾಡಿದರು.
ಈ ವೇಳೆ ಗೃಹ ಸಚಿವ ಜಿ ಪರಮೇಶ್ವರ, ಸಚಿವ ಈಶ್ವರ್ ಖಂಡ್ರೆ ಇವರನ್ನು ಭೇಟಿಯಾಗಿ ಸಮಸ್ಯೆಗಳ ಬಗ್ಗೆ ಸಮಾಲೋಚನೆ ಮಾಡಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಮಹಿಳಾ ಕಾರ್ಯದರ್ಶಿ ಹಾಗೂ ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷ ಶ್ರೀಮತಿ ಡಾ. ನಾಗಲಕ್ಷ್ಮಿ ಚೌಧರಿ ಸೇರಿದಂತೆ ಮಹಿಳಾ ಮುಖಂಡರು ಪಾಲ್ಗೊಂಡಿದ್ದರು.