ವಿಜಯಪುರ ಅಕ್ಕಮಹಾದೇವಿ ವಿವಿಗೆ ಹಂಗಾಮಿ ಕುಲಪತಿಯಾಗಿ ಪ್ರೊ.ಶಾಂತಾದೇವಿ.ಟಿ. ನೇಮಕ

Jan 24, 2025 - 20:54
 0
ವಿಜಯಪುರ ಅಕ್ಕಮಹಾದೇವಿ ವಿವಿಗೆ ಹಂಗಾಮಿ ಕುಲಪತಿಯಾಗಿ ಪ್ರೊ.ಶಾಂತಾದೇವಿ.ಟಿ. ನೇಮಕ

ವಿಜಯಪುರ: ಹಾಲಿ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಅವರು ಸತತ ನಾಲ್ಕು ವರ್ಷಗಳ ಸೇವೆಯ ನಂತರ ಜ.24ರಂದು ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿಗಳಾಗಿ ಸಮಾಜ ವಿಜ್ಞಾನ ನಿಕಾಯದ ಡೀನ್ ಪ್ರೊ.ಶಾಂತಾದೇವಿ. ಟಿ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹಾಗೂ ವಿವಿಯ ಕುಲಾಧಿಪತಿಯಾಗಿರುವ ಥಾವರಚಂದ್ ಗೆಹ್ಲೋಟ್ ಅವರು ಆದೇಶ ಹೊರಡಿಸಿದ್ದಾರೆ. 

ರಾಜ್ಯಪಾಲರ ಆದೇಶದಂತೆ ಪ್ರೊ.ಬಿ.ಕೆ.ತುಳಸಿಮಾಲ ಅವರು ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ.ಟಿ. ಅವರಿಗೆ ಇಂದು ಇಲ್ಲಿ ಜರುಗಿದ ಸರಳ ಸಮಾರಂಭದಲ್ಲಿ ಅಧಿಕಾರವನ್ನು ಹಸ್ತಾಂತರಿಸಿದರು.

   ಈ ಸಂದರ್ಭದಲ್ಲಿ ನಾಲ್ಕು ವರ್ಷಗಳ ಸೇವೆಯಿಂದ ನಿವೃತ್ತರಾದ ಪ್ರೊ.ಬಿ.ಕೆ.ತುಳಸಿಮಾಲ ಅವರನ್ನು ವಿಶ್ವವಿದ್ಯಾನಿಲಯದಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್ ಸಿಂಡಿಕೇಟ್, ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, ವಿವಿಧ ನಿಕಾಯಗಳ ಡೀನರ್, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.