ಪಠ್ಯದಲ್ಲಿ ಸಾಮಾನ್ಯ ಕಾನೂನು ಜ್ಞಾನ ಅಳವಡಿಕೆಯಾಗಲಿ

Jul 22, 2025 - 23:15
 0
ಪಠ್ಯದಲ್ಲಿ ಸಾಮಾನ್ಯ ಕಾನೂನು ಜ್ಞಾನ ಅಳವಡಿಕೆಯಾಗಲಿ
ಮುದ್ದೇಬಿಹಾಳ ಪಟ್ಟಣದ ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಸಮೂಹ ವಿದ್ಯಾ ಸಂಸ್ಥೆಯಲ್ಲಿ ನಡೆದ ವಿದ್ಯಾ ಭಾರತಿ ಕರ್ನಾಟಕ ವಿಜಯಪುರ ಜಿಲ್ಲಾ ಸಂಕುಲಗಳ ಶಾಲೆಗಳ ೨೦೨೫-೨೬ನೇ ಸಾಲಿನ ಶೈಕ್ಷಣಿಕ ಸಹಮಿಲನದಲ್ಲಿ ಕರ್ನಾಟಕ ಸರಕಾರ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ್ವರ ಬಬಲೇಶ್ವರ ಮಾತನಾಡಿದರು.

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ 


ಮುದ್ದೇಬಿಹಾಳ : ಸಾಮಾನ್ಯ ಕಾನೂನಿನ ಅರಿವು ವ್ಯಾಪಕವಾಗಿ ಹದಿಹರೆಯದ ಮಕ್ಕಳ ಪಠ್ಯಕ್ರಮದಲ್ಲಿ ಅಳವಡಿಕೆಯಾದಾಗ ಮಾತ್ರವೇ ದೇಶದ ಬದಲಾವಣೆ ಸಾಧ್ಯ ಎಂದು ಕರ್ನಾಟಕ ಸರಕಾರ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ್ವರ ಬಬಲೇಶ್ವರ ಹೇಳಿದರು.


 ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಭಾನುವಾರ ನಡೆದ ವಿದ್ಯಾ ಭಾರತಿ ಕರ್ನಾಟಕ ವಿಜಯಪುರ ಜಿಲ್ಲಾ ಸಂಕುಲಗಳ ಶಾಲೆಗಳ ೨೦೨೫-೨೬ನೇ ಸಾಲಿನ ಶೈಕ್ಷಣಿಕ ಸಹಮಿಲನದಲ್ಲಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದರು.


ಸಂಸ್ಕಾರದ ಆಯ್ಕೆಯಲ್ಲಿ ಬದುಕಿನ ಉಸಿರು ಅಡಗಿರುತ್ತದೆ. ತಾಯಿ, ರೈತ, ಶಿಕ್ಷಕ ರುಗಳಿಗೆ ಯಾವುದೇ ಜಾತಿ, ಬೇಧ-ಭಾವ ಸಂಕೋಲೆಗಳ ಬಂಧನವಿಲ್ಲ. ಸಮಾಜದ ಅನಿಷ್ಠ ಪದ್ಧತಿ ದೂರವಾಗಬೇಕಾದರೆ ವಿದ್ಯಾರ್ಥಿ ದೆಸೆಯಲ್ಲಿಯೆ ವ್ಯಾಸಂಗಮಾಡಿರಬೇಕು ಎಂದು ಹೇಳಿದರು. 


 ಕೇತ್ರ ಶಿಕ್ಷಣಾಧಿಕಾರಿಗಳಾದ ಬಿ.ಎಸ್.ಸಾವಳಗಿ ಮಾತನಾಡಿ, ವಿದ್ಯಾ ಭಾರತಿ ಸಂಕುಲಗಳು ಭಾರತೀಯ ಚಿಂತನೆಗಳನ್ನು ಎತ್ತರಿಸುವ ಪ್ರಯತ್ನ ಮಾಡುತ್ತಿದೆ. ನಮ್ಮೆಲ್ಲರಲ್ಲಿ ನಾವೆಲ್ಲ ಒಂದು ಎನ್ನುವ ಭಾವೆನೆ ಸದಾ ಇರಬೇಕು. ಶಿಕ್ಷಕರು ತಮ್ಮಲ್ಲಿ ವಿದ್ಯಾರ್ಥಿಗಳನ್ನ ವಿವಿಧ ಕ್ಷೇತ್ರದ ಬೆಳವಣಿಗೆಗೆ ಬೇಕಾದ ತ್ಯಾಗಕ್ಕೆ ಸಿದ್ದರಾಗುವ , ರೈತರನ್ನು ಹಾಗೂ ಶಿಕ್ಷಕರನ್ನು ತಯಾರುಮಾಡಬೇಕಾಗಿದೆ. ಮಕ್ಕಳನ್ನು ದೇಶದ ರತ್ನವನ್ನಾಗಿ ತಯಾರುಮಾಡುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದೆ ಎಂದು ಹೇಳಿದರು.


 ಆರ್.ಎಸ್.ಎಸ್ ಪ್ರಾಂತ ಕಾರ್ಯಕಾರಿಣಿ ಸದಸ್ಯರಾದ ನಾಗೇಶ ಚಿನ್ನಾರೆಡ್ಡಿ ಉಪನ್ಯಾಸ ನೀಡಿದರು.    


ವಿದ್ಯಾ ಭಾರತಿ ಜಿಲ್ಲಾ ಅಧ್ಯಕ್ಷರಾದ ಪ್ರಭು ಕಡಿ, ಪ್ರಾಂತ ವಿದ್ಯಾ ಭಾರತಿ ಕಾರ್ಯದರ್ಶಿ ವಸಂತ ಮಾಧವ, ಜ್ಞಾನ ಭಾರತಿ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಬಿ.ಪಿ.ಕುಲಕರ್ಣಿ, ವಿದ್ಯಾ ಭಾರತಿ ಜಿಲ್ಲಾ ಉಪಾಧ್ಯಕ್ಷರಾದ ಚಂದ್ರಶೇಖರ ಕವಟಗಿ, ಕರ್ನಾಟಕ ಬ್ಯಾಂಕ್ ನಿರ್ದೇಶಕರಾದ ಸತೀಶ ಓಸ್ವಾಲ್ ಇದ್ದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.