ಆಧ್ಯಾತ್ಮಿಕ ಜ್ಞಾನ ಪಡೆದು ಜೀವನ ಪಾವನ ಮಾಡಿಕೊಳ್ಳಿ : ಮನಗೂಳಿಯ ಹಿರೇಮಠದ ಸಂಗನಬಸವ ಶ್ರೀಗಳ ನುಡಿ

Jan 21, 2025 - 23:06
 0
ಆಧ್ಯಾತ್ಮಿಕ ಜ್ಞಾನ ಪಡೆದು ಜೀವನ ಪಾವನ ಮಾಡಿಕೊಳ್ಳಿ : ಮನಗೂಳಿಯ ಹಿರೇಮಠದ ಸಂಗನಬಸವ ಶ್ರೀಗಳ ನುಡಿ

ಸಿಂದಗಿ: ಗುರುವಿನ ಗುಲಾಮನಾಗುವುತನಕ ದೊರೆಯದಣ್ಣ ಮುಕ್ತಿ ಎನ್ನುವಂತೆ ಗುರುಗಳ ಸೇವೆ ಎಷ್ಟು ಮಾಡುತ್ತಿರಿ ಅಷ್ಟು ಜೀವನ ಪ್ರಾಪ್ತಿಯಾಗುತ್ತದೆ ಮಠ-ಮಾನ್ಯಗಳು ಊರಿನ ಹೊರಗೆ ಪ್ರಶಾಂತ ಸ್ಥಳದಲ್ಲಿದ್ದು ಶ್ರೀಗಳಿಗೆ ಜಪ-ತಪ ಯೋಗಾಬ್ಯಾಸÀಗಳನ್ನು ಮಾಡುವ ಮೂಲಕ ಜನರ ಕಷ್ಠ ಕಾರ್ಪಣ್ಯಗಳಿಗೆ ಸ್ಪಂದಿಸುವ ಶ್ರೀಮಠವು ಬಡವರ ಮಠವಾಗಿದ್ದು ಮಾನವ ಜನ್ಮದ ಉದ್ಧಾರಕ್ಕೆ ಅನೇಕ ಮಹಾಪುರಷ ಪುರಾಣ ಪ್ರವಚನಗಳನ್ನು ಹಾಕಿಕೊಳ್ಳುತ್ತಿದು ಮಾನವ ಆಧ್ಯಾತ್ಮಿಕ ಜ್ಞಾನವನ್ನು ಪಡೆದುಕೊಂಡು ತಮ್ಮ ಜೀವನ ಪಾವನ ಮಾಡಿಕೊಳ್ಳಬೇಕು  ಎಂದು ಮನಗೂಳಿಯ ಹಿರೇಮಠದ ಪೂಜ್ಯಶ್ರೀ ಸಂಗನಬಸವ ಶ್ರೀಗಳು ನುಡಿದರು.        

ಪಟ್ಟಣದ ಬಸ್‌ಡಿಪೋ ಹತ್ತಿರದಲ್ಲಿರುವ ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದ ಆವರಣದಲ್ಲಿ ಹಮ್ಮಿಕೊಂಡ ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದ ೨೯ನೆಯ ಜಾತ್ರಾ ಮಹೋತ್ಸವ-ಧರ್ಮಸಭೆ ಕಾರ್ಯಕ್ರಮ ನಿಮಿತ್ಯ ಹಮ್ಮಿಕೊಂಡ ಶ್ರೀ ರೇವಣಸಿದ್ದೇಶ್ವರ ಪುರಾಣ ಪ್ರವಚನ ಸಮಾರಂಭದ ಅದ್ಯಕ್ಷತೆÀ ವಹಿಸಿ ಮಾತನಾಡಿದ ಅವರು ಮನುಷ್ಯನಿಗೆ ಆಕ್ಸಿಜನ್ ನೀಡುವ ಗೀಡ-ಮರಗಳನ್ನು ಮನೆ ಕಟ್ಟುವ ಮುನ್ನವೇ ಹಚ್ಚಿ ನೈಸರ್ಗಿಕವಾದ ಗಾಳಿ ಪಡೆದುಕೊಂಡು ಆಯುಷ್ಯ ವೃದ್ಧಿಪಡಿಸಿಕೊಳ್ಳಬೇಕು ಎಂದರು.

               
ಪತ್ರಕರ್ತರ ಧ್ವನಿ ಸಂಘದ ಅಧ್ಯಕ್ಷ ಪಂಡಿತ ಯಂಪೂರೆ ಮಾತನಾಡಿ, ಶಿಕ್ಷಣ ಸಂಸ್ಥೆಗಳು ಜ್ಞಾನವನ್ನು ನೀಡಿದರೆ ಮಠ-ಮಂದಿರಗಳಲ್ಲಿ ಸಂಸ್ಕಾರದ ಜೊತೆಗೆ ಆಧ್ಯಾತ್ಮ ದೊರೆಯುತ್ತದೆ ಕಾರಣ ತಾಯಂದಿರು ಮಕ್ಕಳನ್ನು ಪುರಾಣ ಪುಣ್ಯಕತೆಗಳಲ್ಲಿ ತೊಡಗಿಸಬೇಕು ಎಂದು ಅಭಿಮತ ವ್ಯಕ್ತಪಡಿಸಿದರು.                

ದಿವ್ಯ ಸಾನಿಧ್ಯ ವಹಿಸಿದ ನಾಲವಾರ ಶ್ರೀಮಠದ ಶಿವಯೋಗಿ ಡಾ.ಚಂದ್ರಶೇಖರ ಸ್ವಾಮಿಗಳು, ಬಾಜಪ ಜಿಲ್ಲಾ ಉಪಾಧ್ಯಕ್ಷ ರಾಜಶೇಖರ ಪೂಜಾರ, ಅಶೋಕ ಕಮರಡ್ಡಿ, ದುಂಡಪ್ಪಗೌಡ ಆನಗೊಂಡ, ಪ್ರವಚನಕಾರ ಮೈಂದರಗಿ ಗುರುಹಿರೇಮಠದ ಷ.ಬ್ರ ಅಭಿನವ ರೇವಣಸಿದ್ದ ಗುರುಗಳು, ಸಂಗೀತಗಾರ ಶಾಂತಲಿAಗ ಹೊನ್ನಕಿರಣಗಿ, ತಬಲಾ ಆಕಾಶ ಹೈದ್ರಾ,  ಸೇರಿದಂತೆ ಶ್ರೀಮಠದ ಭಕ್ತರು ಇದ್ದರು. ಪೂಜಾ ಹಿರೇಮಠ ನಿರೂಪಿಸಿದರು. ಸಿದ್ದಲಿಂಗಯ್ಯ ಹಿರೇಮಠ ಸ್ವಾಗತಿಸಿದರು.

ಜ.೨೨ ರಂದು ಶ್ರೀಮಠದ ಸುತ್ತಮುತ್ತ ಆಧಿಶೇಷರ ಮೆರವಣಿಗೆ ಬರುತ್ತಿದ್ದು ಎಲ್ಲ ತಾಯಂದಿರು ಮನೆ ಮುಂದೆ ಅಲಂಕಾರ ಮಾಡುವ ಮೂಲಕ ಸ್ವಚ್ಚತೆ ಕಾಪಾಡಿ ಪ್ರತಿ ಮನೆಯ ನೀರು ಹೂವು ಹಣ್ಣು ಕಾಯಿ ಹಿಡಿದುಕೊಂಡು ಸ್ವಾಗತಿಸಿಕೊಂಡು ತಮ್ಮ ಜೀವನ ಪಾವನಗೊಳಿಸಿಕೊಳ್ಳಬೇಕು ಮತ್ತು ಜ.೨೩ ರಂದು ನಾಲವಾರ ಶ್ರೀಮಠದ ಶಿವಯೋಗಿ ಡಾ.ಚಂದ್ರಶೇಖರ ಸ್ವಾಮಿಗಳ ೫೪ನೇ ಅನುಷ್ಠಾನ ಸುವರ್ಣ ಮಹೋತ್ವ ಹಾಗೂ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಆಶಿರ್ವಾದ ಪಡೆದುಕೊಳ್ಳಬೇಕು.

-ನಾಗರತ್ನ ರಾಜಯೋಗಿ ವೀರರಾಜೇಂದ್ರ ಮಹಾಸ್ವಾಮಿಗಳು ಆದಿಶೇಷ ಮಠ ಸಿಂದಗಿ

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.