ಅಬಕಾರಿ ದಾಳಿ : ೬ ಲೀ.ಕಳ್ಳಭಟ್ಟಿ ಸಾರಾಯಿ ಜಪ್ತಿ

Jun 20, 2025 - 21:49
 0
ಅಬಕಾರಿ ದಾಳಿ  : ೬ ಲೀ.ಕಳ್ಳಭಟ್ಟಿ ಸಾರಾಯಿ ಜಪ್ತಿ

ವಿಜಯಪುರ : ವಿಜಯಪುರ ಅಬಕಾರಿ ಇಲಾಖೆ ಅಧಿಕಾರಿಗಳು ತಿಕೋಟಾ ತಾಲೂಕಿನ ಕಳ್ಳಕವಟಗಿ ತಾಂಡಾ-೨ದ ಮನೆಯೊಂದರ ಮೇಲೆ ದಾಳಿ ನಡೆಸಿ, ೦೬ ಲೀ. ಕಳ್ಳಭಟ್ಟಿ ಸಾರಾಯಿ ಜಪ್ತಿ ಮಾಡಿಕೊಂಡು ಆರೋಪಿತ ಅನೀಲ ಪವಾರ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.        

ದಾಳಿಯಲ್ಲಿ ಅಬಕಾರಿ ಉಪ ನಿರೀಕ್ಷಕರಾದ ಅನೀಲ ಪತ್ತಾರ, ಮುಖ್ಯ ಪೇದೆ ಎ.ಎ.ನಾಗೂರ, ಎಂ.ಎಸ್.ಕೊಟ್ಟಲಗಿ, ಶ್ರೀಶೈಲ ಬಂಡಗಾರ ಭಾಗವಹಿಸಿದ್ದರು ಎಂದು ಅಬಕಾರಿ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.