ವಿಜಯಪುರ : ನಾಯಿ, ಹಾವುಗಳು ಕಚ್ಚಿದಾಗ ಸ್ವಾಮಿಗಳಿಂದ ದಾರ ಕಟ್ಟಿಸಿಕೊಂಡರೇ ಸರಿಯಾಗುತ್ತದೆ ಎಂಬ ಮೂಡನಂಬಿಕೆಯಿAದ ಜನರಿಗೆ ಹೊರ ತರುವ ಕಾರ್ಯವಾಗಬೇಕು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.
ಫೆ.೧೦ ರಿಂದ ಸಿಂದಗಿ ಹಾಗೂ ಮುದ್ದೇಬಿಹಾಳ ತಾಲೂಕಿನಲ್ಲಿ ಸಾಮೂಹಿಕ ಆನೆಕಾಲು ರೋಗದ ಔಷದ ನುಂಗಿಸುವ ಕಾರ್ಯಕ್ರಮದ ಕುರಿತು ಗುರುವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಆಯೋಜಿಸಿದ ಆರೋಗ್ಯ ಇಲಾಖೆಯ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದÀರು.
ಕೆಲ ಮಕ್ಕಳು ನಾಯಿ ಕಚ್ಚಿದಾಗ ಭಯದಿಂದ ಪಾಲಕರಿಗೆ ಹೇಳದೆ ಅರಿವಿಲ್ಲದೆ ತಮ್ಮ ಆರೋಗ್ಯಕ್ಕೆ ಕುತ್ತು ತಂದುಕೊಳ್ಳುತ್ತಾರೆ. ಇದನ್ನು ತಡೆಯಲು ಮಕ್ಕಳಿಗೆ ಪ್ರಾಣಿ ಕಡಿತದಿಂದಾಗುವ ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಗಳನ್ನು ಸಮರ್ಪಕವಾಗಿ ನೆರವೆರಿಸಲು ಸಹಕಾರಿಸಬೇಕು ಎಂದು ಸಂಬAಧಿಸಿದ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಮೇಲಿಂದ ಮೇಲೆ ಕುಡಿಯುವ ನೀರಿನ ಟ್ಯಾಂಕ್ ಗಳನ್ನು ಸ್ವಚ್ಗೊಳಿಸಬೇಕು. ಟ್ಯಾಂಕ್ ಮೇಲಿನ ಮುಚ್ಚಳ್ಳ ಹಾಕಿಸಬೇಕು. ಒಡೆದ ಪೈಪ್ ಗಳನ್ನು ದುರಸ್ತಿ ಮಾಡಿಸಿ ಶುಧ ಕುಡಿಯುವ ನೀರನ್ನು ಜನರಿಗೆ ಒದಗಿಸಿ, ರೋಗ ತಡೆಗಟ್ಟಲು ಪಂಚಾಯತ, ಪುರಸಭೆ ಹಾಗೂ ನಗರಸಭೆಗಳು ಸಹಕರಿಸಬೇಕೆಂದು ಅವರು ಸೂಚಿಸಿದರು.
ಕಾಲ ಕಾಲಕ್ಕೆ ಅಡುಗೆ ತಯಾರಕರು, ಸಹಾಯಕರ ಆರೋಗ್ಯ ತಪಾಸಣೆ ನಡೆಸಬೇಕು. ಅಂಗನವಾಡಿ ಸಹಾಯಕಿಯರು ತಾಯಂದಿರ ಸಭೆ ಅಥವಾ ಇತರೆ ಕಾರ್ಯಕ್ರಮಗಳಲ್ಲಿ ಸಾಂಕ್ರಾಮಿಕ ರೋಗಗಳ ಬಗ್ಗೆ ಹಾಗೂ ರೆಬಿಸ್ ಕಾಯಿಲೆ ಬಗ್ಗೆ, ಚಿಕಿತ್ಸೆ ಕುರಿತು ವ್ಯಾಪಕವಾಗಿ ಮಾಹಿತಿ ನೀಡುವ ಕಾರ್ಯ ನಡೆಯಬೇಕೆಂದು ಅವರು ಸಂಬAಧಿಸಿದ ಅಧಿಕಾರಿಗಳಿಗೆ ಹೇಳಿದರು.
ಸಾಂಕ್ರಾಮಿಕ ರೋಗ ತಡೆಗಟ್ಟಲು ಒಗಟ್ಟಾಗಿ ಶ್ರಮಿಸಬೇಕೆಂದು ಅವರು ಎಲ್ಲ ಇಲಾಖೆಗಳಿಗೆ ಕರೆ ಕೊಟ್ಟರು.
ಈ ಸಂದರ್ಭದಲ್ಲಿ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಜಿಲ್ಲಾ ಶಸ್ತç ಚಿಕಿತ್ಸ ಡಾ. ಶಿವಾನಂದ ಮಾಸ್ತಿಹೊಳಿ ಜಿಲ್ಲಾ ಆರ್ ಸಿ ಎಚ್ ಅಧಿಕಾರಿ ಡಾ. ಕೆ.ಡಿ. ಗುಂಡಬಾವಡಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜೇಶ್ವರಿ ಗೊಲಗೇರಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಜಾನ್.ಆಯ್ .ಕಟವಟಿ, ಡಿಎಲ್ಓ ಅರ್ಚನ ಕುಲಕರ್ಣಿ, ಡಿಟಿಓ ಎಂ.ಬಿ.ಬಿರಾದಾರ್, ತಾಲೂಕು ಆರೋಗ್ಯ ಅಧಿಕಾರಿಗಳಾದ ಕವಿತಾ ದೊಡ್ಡಮನಿ, ಸತೀಶ ತಿವಾರಿ, ಎ.ಎ.ಮಾಯಗಿ, ಕೃಷ್ಣಕುಮಾರ ಜಾಧವ, ಜಿಲ್ಲಾ ಪಂಚಾಯತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.