ಆನೆಕಾಲು ರೋಗ ತಡೆಗೆ ಜಾಗೃತಿ ಯಶಸ್ವಿಗೊಳಿಸಿ : ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ

ವಿಜಯಪುರ : ಆನೆಕಾಲು ರೋಗ ತಡೆಗೆ ಡಿ.ಈ.ಸಿ ಮಾತ್ರೆ ನುಂಗುವುದರಿAದ ಯಾವುದೇ ಅಡ್ಡ ಪರಿಣಾಮಗಳಿಲ್ಲ ಎಂದು ಸಾರ್ವಜನಿರಿಗೆ ಮನವರಿಕೆ ಮಾಡಿ, ಜಾಗೃತಿ ಮೂಡಿಸುವ ಕಾರ್ಯ ಸಂಬAಧಿಸಿದ್ದ ಇ¯ಖೆಗಳು ಯಶಸ್ವಿಯಾಗಿ ಮಾಡಬೇಕೆಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.
ಫೆ.೧೦ ರಿಂದ ಸಿಂದಗಿ ಹಾಗೂ ಮುದ್ದೇಬಿಹಾಳ ತಾಲೂಕಿನಲ್ಲಿ ಸಾಮೂಹಿಕ ಆನೆಕಾಲು ರೋಗದ ಔಷದ ನುಂಗಿಸುವ ಕಾರ್ಯಕ್ರಮದ ಕುರಿತು ಗುರುವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಆಯೋಜಿಸಿದ ಆರೋಗ್ಯ ಇಲಾಖೆಯ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದÀರು.
ಆನೇಕಾಲು ರೋಗ, ವೃಷಣಬಾವು ರೋಗಗಳ ಲಕ್ಷಣಗಳ, ಹರುಡಿವಿಕೆ, ತಡೆಗಟ್ಟುವಿಕೆ ಮತ್ತು ಮುಂಜಾಗ್ರತೆ ಕ್ರಮವಾಗಿ ಮಾತ್ರೆಗಳನ್ನು ಸೇವಿಸುವಂತೆ ಸಾರ್ವಜನಿಕರಿಗೆ ಮನವರಿಕೆ ಮಾಡಬೇಕು ಎಂದು ಅಧಿಕಾರಿಗಳಿಗೆ ಅವರು ಹೇಳಿದರು. ಈ ಕಾರ್ಯಕ್ರಮಕ್ಕೆ ಸಂಬAದಿಸಿದAತೆ ಜಿಲ್ಲಾ ಮಟ್ಟದ ಒಬ್ಬ ನೋಡಲ್ ಅಧಿಕಾರಿಯನ್ನು ಗುರುತಿಸಿ, ಅಧಿಕಾರಿಯು ತಮ್ಮ ಅಧೀನ ಕಾರ್ಯಾಲಯಗಳಿಗೆ ಅವಶ್ಯಕ ಅಗತ್ಯತೆಗಳನ್ನು ಪೂರೈಸುವಂತೆ ನಿರ್ದೇಶನಗಳನ್ನು ನಿಡಬೇಕು.
ಆರೋಗ್ಯ ಇಲಾಖೆಯು ಪ್ರಾ.ಆ. ಕೇಂದ್ರ, ತಾಲೂಕು ಮಟ್ಟದಲ್ಲಿ ಕೈಗೊಳ್ಳವ ಪೂರ್ವಬಾವಿ ಮತ್ತು ಎಂಡಿಎ ಸಮಯದಲ್ಲಿ ಭಾಗವಹಿಸಿ ಕಾರ್ಯಕ್ರಮದ ಸ್ಥಳಿಯ ಅಗತ್ಯತೆಗಳನ್ನು ಪೂರೈಸಬೇಕು.
ಅಂಗನವಾಡಿ ಕಾರ್ಯಕರ್ತೆಯರು ಆಯಾ ಗ್ರಾಮದ ಔಷಧಿ ನುಂಗಿಸುವ ತಂಡದ ಸಕ್ರಿಯ ಸದಸ್ಯರಗುರುತಿಸಿ ಅಂಗನವಾಡಿ ಶಾಲೆಯಲ್ಲಿ ಎಲ್ಲಾ ಅರ್ಹ ಮಕ್ಕಳಿಗೆ ಮಾತ್ರೆಗಳನ್ನು ನುಂಗಿಸುಲು ತಾಲೂಕಿನ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಜಿಲ್ಲಾ ಶಸ್ತç ಚಿಕಿತ್ಸ ಡಾ. ಶಿವಾನಂದ ಮಾಸ್ತಿಹೊಳಿ ಜಿಲ್ಲಾ ಆರ್ ಸಿ ಎಚ್ ಅಧಿಕಾರಿ ಡಾ. ಕೆ.ಡಿ. ಗುಂಡಬಾವಡಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜೇಶ್ವರಿ ಗೊಲಗೇರಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಜಾನ್.ಆಯ್. ಕಟವಟಿ, ಡಿಎಲ್ಓ ಅರ್ಚನ ಕುಲಕರ್ಣಿ, ಡಿಟಿಓ ಎಂ.ಬಿ.ಬಿರಾದಾರ್, ತಾಲೂಕು ಆರೋಗ್ಯ ಅಧಿಕಾರಿಗಳಾದ ಕವಿತಾ ದೊಡ್ಡಮನಿ, ಸತೀಶ ತಿವಾರಿ, ಎ.ಎ.ಮಾಯಗಿ, ಕೃಷ್ಣಕುಮಾರ ಜಾಧವ, ಸೇರಿದಂತೆ ಜಿಲ್ಲಾ ಪಂಚಾಯತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸಾರ್ವಜನಿಕರಲ್ಲಿರುವ ಕುಷ್ಠರೋಗದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯ ಆಶಾ ಕಾರ್ಯ ಕರ್ತರಿಂದ ಹಿಡಿದು ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮಾಡಬೇಕು. ಕುಷ್ಠರೋಗವು ಒಂದು ಸಾಂಕ್ರಾಮಿಕ ರೋಗವಾಗಿದ್ದು, ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ-೨೦೨೫ರ ಬಗ್ಗೆ ಜಾಗೃತಿ ಕಾರ್ಯವನ್ನು ಎಲ್ಲ ಇಲಾಖೆಯ ಅಧಿಕರಿಗಳು ಹಾಗೂ ಸಿಬ್ಬಂದಿ ಯಶಸ್ವಿಯಾಗಿ ಮಾಡಬೇಕು. ಕುಷ್ಠರೋಗದ ಚಿಕಿತ್ಸೆಯು ಸಂಪೂರ್ಣ ಉಚಿತವಾಗಿದ್ದು, ರೋಗಿಯ ಮನೆಯ ಬಾಗಿಲಿಗೆ ಚಿಕಿತ್ಸೆ ದೊರೆಯುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವತ್ತ ಕಾರ್ಯಕ್ರಮ ಕೈಗೊಳ್ಳಿ.
-ಸೋಮಲಿಂಗ ಗೆಣ್ಣೂರ
ಅಪರ ಜಿಲ್ಲಾಧಿಕಾರಿ